Accident news: A lorry collided with a tractor carrying Ganapana Murthy in Koppal: the condition of four is critical

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಕೊಪ್ಪಳ: ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿಯೂ ನೆಲಕ್ಕುರುಳಿದೆ‌. ಅದೇ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ‌‌.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ