Accident news Accident board on road

Accident news: ಮೊನ್ನೆ ವಾಂತಿ.. ನಿನ್ನೆ ಮೂತ್ರದಿಂದ ತಪ್ಪಿತು ದುರಂತ!

Accident news: ಮೊನ್ನೆ ವಾಂತಿ.. ನಿನ್ನೆ ಮೂತ್ರದಿಂದ ತಪ್ಪಿತು ದುರಂತ!

ಚಾಮರಾಜನಗರ: ವಾಂತಿಯ ಕಾರಣ ಕಾರು ನಿಲ್ಲಿಸಿ ಕೆಳಕಿಳಿದಿದ್ದ ವೇಳೆ ಟ್ಯಾಂಕ್ ಕಾರಿನ ಮೇಲೆ ಉರುಳಿ (Accident news) ಅಪ್ಪಚ್ಚಿಯಾದ ವೇಳೆ ಐದು ಮಂದಿ ಪಾರಾಗಿದ್ದ ಬೆನ್ನಲ್ಲೇ, ಮೂತ್ರ ವಿಸರ್ಜನೆ ಕಾರಣ ದ್ವಿಚಕ್ರ ವಾಹನ ನಿಲ್ಲಿಸಿ, ತೆರಳಿದ್ದ ವೇಳೆ ಓರ್ವನ ಜೀವ ಉಳಿದಿರುವ ಘಟನೆ ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ಘಟನೆ ನಡೆದಿದೆ.

Join Our Telegram: https://t.me/dcgkannada

ಗುಂಡ್ಲುಪೇಟೆ ತಾಲೂಕಿನ‌ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಓರ್ವ (Accident news) ಮೃತಪಟ್ಟಿದ್ದಾನೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿ‌ನ 23 ವರ್ಷದ ಗಣೇಶ್ ಎಂಬಾತ ಮೃತಪಟ್ಟ ಬೈಕ್ ಸವಾರ. ಈತನ ಸ್ನೇಹಿತ ಅಪಘಾತದಿಂದ ಪಾರಾಗಿದ್ದಾನೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆಗೆಂದು ರಸ್ತೆ ಪಕ್ಕಕ್ಕೆ ತೆರಳಿದ್ದ. ಇದೇ ವೇಳೆ ಎದುರಿನಿಂದ ಬಂದ ಕೇರಳ ಮೂಲದ ಕಾರು ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ‌.

ಇದನ್ನೂ ಓದಿ: Raiachuru: ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟ‌ರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಬೈಕ್​ನಲ್ಲಿ ಕುಳಿತಿದ್ದ ಸವಾರ ಗಣೇಶ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ‌. ಮೂತ್ರ ವಿಸರ್ಜನೆಗೆ ತೆರಳಿದ್ದ ಈತನ ಸ್ನೇಹಿತ ಅವಘಡದಿಂದ ಪಾರಾಗಿದ್ದಾನೆ‌‌ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಕಾರು, ಬೈಕ್ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ