ಅಪ್ರಾಪ್ತೆಗೆ ತಾಳಿಕಟ್ಟಿದ ಆರೋಪಿ ಬಂಧನ: ವಸತಿ ಶಾಲೆ ವಾರ್ಡನ್ ಅಮಾನತು

ಅಪ್ರಾಪ್ತೆಗೆ ತಾಳಿಕಟ್ಟಿದ ಆರೋಪಿ ಬಂಧನ: ವಸತಿ ಶಾಲೆ ವಾರ್ಡನ್ ಅಮಾನತು


ಮುದ್ದೇಬಿಹಾಳ : ವಸತಿ ನಿಲಯದ ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧನದ ಭೀತಿಯಲ್ಲಿ ಪೆಟ್ರೋಲ್ ಕುಡಿದು ಅಸ್ವಸ್ಥಗೊಂಡು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಆರೋಪಿ ಮೌನೇಶ ಮಾದರ ಗುಣಮುಖನಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಸೇವಾ ನ್ಯೂನತೆ ಆಪಾದನೆ ಮೇರೆಗೆ ಘಾಳಪೂಜಿ ಸರ್ಕಾರಿ ವಸತಿ ನಿಲಯದ ವಾರ್ಡನ್ ಶಿವಲಿಂಗಪ್ಪ ಕಾಂಬಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಹಾಗೂ ವಸತಿ ಶಾಲೆಯ ಪ್ರಾಚಾರ್ಯರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ತಿಳಿಸಿದ್ದಾರೆ.

ಮತ್ತೆ ಇಬ್ಬರ ಬಂಧನ:
ನಾಲತವಾಡ ಪಟ್ಟಣದಲ್ಲಿ ಚುಡಾಯಿಸಿ, ಕಿರುಕುಳ ನೀಡಿದ್ದ ಯುವಕರ ವಿರುದ್ಧ ಪೋಕ್ಸೊ ದೂರು ದಾಖಲಿಸಿ, ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಮಸಬಿನಾಳ ಮತ್ತು ಸಂಗಮೇಶ ಮಾದರ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.

ಅಪ್ರಾಪ್ತೆಗೆ ತಾಳಿಕಟ್ಟಿ ಬಂಧಿತನಾಗಿರುವ ಮೌನೇಶ ಮಾದರ ನಾಲತವಾಡದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ