Accused of trying to bring a bad name to the Congress government

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಕೆಲಸಗಳನ್ನು ಪಡೆದಿರುವ ನಾಲ್ವರು ಗುತ್ತಿಗೆದಾರರು ಹಿಡಿದ ಕೆಲಸವನ್ನು ಪೂರ್ಣಗೊಳಿಸದೇ ನಿರಾಸಕ್ತಿ ತೋರುತ್ತಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ. ಅಂತವರು ಕೆಲಸ ತ್ವರಿತವಾಗಿ ಆರಂಭಿಸದಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಎರಡ್ಮೂರು ಬಾರಿ ಕೆಲಸ ಮಾಡದ ಗುತ್ತಿಗೆದಾರರಿಗೆ ನಿರ್ದೇಶನ ಮಾಡಿದ್ದರೂ ಕೂಡಾ ಕೆಲಸ ಕೈಗೆತಿಕೊಳ್ಳುತ್ತಿಲ್ಲ. ಸನ್ 2022-23ರಲ್ಲಿ ಈ ಗುತ್ತಿಗೆದಾರರಿಗೆ ಯಾವ ರೀತಿ ಕೆಲಸ ನೀಡಲಾಗಿತ್ತು ಗೊತ್ತಿಲ್ಲ. ಆದರೆ, ಅವರು ಕೆಲಸ ಮಾಡುತ್ತಿಲ್ಲ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸ್ವತಃ ಲೋಕಾಯುಕ್ತ ತನಿಖೆಗೂ ನಾವೇ ದೂರು ನೀಡುತ್ತೇವೆ ಎಂದು ಹೇಳಿದರು.

ಚೋರಗಿ, ಬಿ. ಎಸ್. ಪಾಟೀಲ ವಣಕ್ಯಾಳ, ಹೇಮಚಂದ್ರ ಸಂಗಮ, ಬಿ. ಎಸ್. ಪಾಟೀಲ ಎಂಬುವರು ಗುತ್ತಿಗೆ ಕೆಲಸವನ್ನು ಪಡೆದಿದ್ದಾರೆ. ಆದರೆ ಅರ್ಧಮರ್ಧ ಕೆಲಸ ಮಾಡಿ ಬಾಕಿ ಕೆಲಸವನ್ನು ಮಾಡದೇ ತಟಸ್ಥವಾಗಿದ್ದಾರೆ. ಬಿ. ಎಸ್. ಪಾಟೀಲ ವಣಕ್ಯಾಳ ಎಂಬ ಗುತ್ತಿಗೆದಾರರಿಗೆ 7.93 ಕೋಟಿ ರೂ. ಕೆಲಸದಲ್ಲಿ ಸುಮಾರು 90 ಲಕ್ಷ ರೂ.ದಷ್ಟು ಮುಂಗಡ ಬಿಲ್ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ ತಾಳಿಕೋಟಿ, ಮುದ್ದೇಬಿಹಾಳದ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿದರು.

ಕೆಲಸ ಮಾಡಲು ಗುತ್ತಿಗೆದಾರರಿಗೆ ನೀಡಿದ್ದ ನಿಗದಿತ ಸಮಯ ಮುಗಿದುಹೋಗಿದೆ. ಕಾರಣ ಏನೆಂಬುದು ತಿಳಿಯುತ್ತಿಲ್ಲ. ಜನ ಸಾಮಾನ್ಯರ ಕೆಲಸಕ್ಕೆ ತೊಂದರೆ ಮಾಡುವಂತಹ ಕೆಲಸ ಈ ಗುತ್ತಿಗೆದಾರರು ಮಾಡುತ್ತಿದ್ದಾರೆ. ನಾನು ಮತಕ್ಷೇತ್ರದಲ್ಲಿ ಯಾವುದೇ ಕೆಲಸ ನಿಲ್ಲಿಸುವಂತೆ ಹೇಳಿಲ್ಲ. ನನ್ನ 40 ವರ್ಷದ ರಾಜಕಾರಣದಲ್ಲಿ ಇಂತಹ ಕನಿಷ್ಠಮಟ್ಟಕ್ಕೆ ಇಳಿಯುವಂತಹ ಕೆಲಸ ಮಾಡಿಲ್ಲ ಎಂದು ಹೇಳಿದರು.

ರಿಸ್ಕ್ ಅಂಡ್ ಕಾಸ್ಟ್ ಮಾಡಿ ಸಂಬಂಧಿಸಿದ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಮುದ್ದೇಬಿಹಾಳ ಪುರಸಭೆಯಲ್ಲಿ ಪ್ರತ್ಯೇಕ ಪ್ಯಾಕೇಜ್ ಅಡಿ 7 ಕೋಟಿ ರೂ.ಗೂ ಅಧಿಕ ಮೊತ್ತದ ಕೆಲಸ ಹಿಡಿದಿದ್ದ ಚೋರಗಿ ಎಂಬ ಗುತ್ತಿಗೆದಾರ ಕೆಲಸ ಮಾಡದೇ ಕಾಣೆಯಾಗಿದ್ದಾರೆ. ಈಗಾಗಲೇ ಅವರಿಗೆ 1 ಕೋಟಿ ರೂ ಅಧಿಕ ಬಿಲ್ ಪಾವತಿಸಲಾಗಿದೆ ಎಂದು ಹೇಳಿದರು.

ಮುದ್ದೇಬಿಹಾಳ, ತಾಳಿಕೋಟಿ, ನಾಲತವಾಡದಲ್ಲಿ ಕೆಲಸಗಳನ್ನು ನಿಲ್ಲಿಸಿ ಕಾಂಗ್ರೆಸ್ ಸರ್ಕಾರ ಬಂದು ಕೆಲಸ ನಿಲ್ಲಿಸಿತು ಎಂದು ಕೆಟ್ಟ ಹೆಸರು ತರಲು ಕುತಂತ್ರಗಳು ನಡೆದಿವೆ. ಈ ಕೆಲಸಗಳನ್ನು ಹಿಡಿದವರೆಲ್ಲ ಕಟ್ಟಾ ಬಿಜೆಪಿ ಫಾಲೋವರ್ಸ್ ಇದ್ದಾರೆ. ರಾಜಕಾರಣ ಮಾಡುವುದಿದ್ದರೆ ರಾಜಕಾರಣ ಮಾಡಿ. ಅದು ಬಿಟ್ಟು ಈ ರೀತಿ ಗುತ್ತಿಗೆ ಹಿಡಿದು ಕೆಲಸ ಮಾಡದೇ ಜನಸಾಮಾನ್ಯರಿಗೆ ತೊಂದರೆ ಕೊಡುವುದು, ಅಭಿವೃದ್ಧಿ ರಾಜಕಾರಣದಲ್ಲಿ ಅಡತಡೆಯನ್ನುಂಟು ಮಾಡುವ ಕ್ರಮ ಸರಿಯಲ್ಲ ಎಂದು ಹೇಳಿದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ