ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ