ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್