ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ