ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ