ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,