ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ