ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ