ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು