Adapt the biography of Hande Hanumappa Nayaka into the text

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಕೂಡಲಸಂಗಮದಲ್ಲಿ ಜರುಗಿದ ರಾಜ್ಯಮಟ್ಟದ ಸಮಾವೇಶದ ಯಶಸ್ವಿಗೆ ಶ್ರಮಿಸಿದವರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ ಮಾತನಾಡಿ, ಕೂಡಲಸಂಗಮದಲ್ಲಿ ಫೆ.2 ರಂದು ನಡೆದ ಸಮಾಜದ ರಾಜ್ಯಮಟ್ಟದ ಸಮಾವೇಶ ಯಶಸ್ವಿಗೆ ತಾಲ್ಲೂಕಿನಿಂದ ಸಮಾಜದ ಬಾಂಧವರು 12 ಲಕ್ಷ ರೂ.ಗಳವರೆಗೆ ಉದಾರವಾದ ದೇಣಿಗೆ ನೀಡಿ ಸಹಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ. ಎಂ. ಬೆಳಗಲ್ ಮಾತನಾಡಿ, ಸಮಾಜದಲ್ಲಿರುವ ಬಡ ಮಕ್ಕಳ ಶಿಕ್ಷಣದ ವೆಚ್ಚಕ್ಕಾಗಿ ಸಮಾಜದ ಬಾಂಧವರು ಉಳಿತಾಯ ಮಾಡಿ ಅದನ್ನು ಅರ್ಹರಿಗೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು ಎಂದರು.

ಸಮಾಜದ ರಾಜ್ಯ ಉಪಾಧ್ಯಕ್ಷ ರಾಜಶೇಖರ ಮೇಗೇರಿ, ಸಮಾಜದ ತಾಲ್ಲೂಕು ಅಧ್ಯಕ್ಷ, ವಕೀಲರಾದ ಎಂ. ಬಿ. ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷ ಸಂಗಮೇಶ ಕರಭಂಟನಾಳ, ಎಸ್. ಎಸ್. ಭೂತಲ್ ಮಾತನಾಡಿದರು.

ಯುವ ಘಟಕದ ರಾಜ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭು ಬೆಳ್ಳಿ, ಗೌರವಾಧ್ಯಕ್ಷ ಕೆ. ಎನ್. ಗೌಡರ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ತಂಗಡಗಿ, ಮುಖಂಡರಾದ ಬಿ. ಎಲ್. ಬಿರಾದಾರ, ಹಣಮಗೌಡ ಪಾಟೀಲ, ಮಂಜುನಾಥ ಪಾಟೀಲ, ಎಸ್. ಬಿ. ಹಂಡರಗಲ್, ಹೇಮಾ ಬಿರಾದಾರ, ಸಂಗಮೇಶ ಶಿವಣಗಿ ಇದ್ದರು.

ಕಾರ್ಯಕ್ರಮದಲ್ಲಿ ಆಲಕೊಪ್ಪರದ ವಿದ್ಯಾರ್ಥಿನಿ ಗೀತಾ ಬಿರಾದಾರ ಎಸ್.ಎಸ್.ಎಲ್.ಸಿಯಲ್ಲಿ ಶೇ.96ರಷ್ಟು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಸಮಾಜದ ಬಾಂಧವರು ಶೈಕ್ಷಣಿಕ ವೆಚ್ಚಕ್ಕೆಂದು 16 ಸಾವಿರ ರೂ. ಆರ್ಥಿಕ ನೆರವು ನೀಡಿದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ