Adapt the biography of Hande Hanumappa Nayaka into the text

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಕೂಡಲಸಂಗಮದಲ್ಲಿ ಜರುಗಿದ ರಾಜ್ಯಮಟ್ಟದ ಸಮಾವೇಶದ ಯಶಸ್ವಿಗೆ ಶ್ರಮಿಸಿದವರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ ಮಾತನಾಡಿ, ಕೂಡಲಸಂಗಮದಲ್ಲಿ ಫೆ.2 ರಂದು ನಡೆದ ಸಮಾಜದ ರಾಜ್ಯಮಟ್ಟದ ಸಮಾವೇಶ ಯಶಸ್ವಿಗೆ ತಾಲ್ಲೂಕಿನಿಂದ ಸಮಾಜದ ಬಾಂಧವರು 12 ಲಕ್ಷ ರೂ.ಗಳವರೆಗೆ ಉದಾರವಾದ ದೇಣಿಗೆ ನೀಡಿ ಸಹಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ. ಎಂ. ಬೆಳಗಲ್ ಮಾತನಾಡಿ, ಸಮಾಜದಲ್ಲಿರುವ ಬಡ ಮಕ್ಕಳ ಶಿಕ್ಷಣದ ವೆಚ್ಚಕ್ಕಾಗಿ ಸಮಾಜದ ಬಾಂಧವರು ಉಳಿತಾಯ ಮಾಡಿ ಅದನ್ನು ಅರ್ಹರಿಗೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು ಎಂದರು.

ಸಮಾಜದ ರಾಜ್ಯ ಉಪಾಧ್ಯಕ್ಷ ರಾಜಶೇಖರ ಮೇಗೇರಿ, ಸಮಾಜದ ತಾಲ್ಲೂಕು ಅಧ್ಯಕ್ಷ, ವಕೀಲರಾದ ಎಂ. ಬಿ. ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷ ಸಂಗಮೇಶ ಕರಭಂಟನಾಳ, ಎಸ್. ಎಸ್. ಭೂತಲ್ ಮಾತನಾಡಿದರು.

ಯುವ ಘಟಕದ ರಾಜ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭು ಬೆಳ್ಳಿ, ಗೌರವಾಧ್ಯಕ್ಷ ಕೆ. ಎನ್. ಗೌಡರ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ತಂಗಡಗಿ, ಮುಖಂಡರಾದ ಬಿ. ಎಲ್. ಬಿರಾದಾರ, ಹಣಮಗೌಡ ಪಾಟೀಲ, ಮಂಜುನಾಥ ಪಾಟೀಲ, ಎಸ್. ಬಿ. ಹಂಡರಗಲ್, ಹೇಮಾ ಬಿರಾದಾರ, ಸಂಗಮೇಶ ಶಿವಣಗಿ ಇದ್ದರು.

ಕಾರ್ಯಕ್ರಮದಲ್ಲಿ ಆಲಕೊಪ್ಪರದ ವಿದ್ಯಾರ್ಥಿನಿ ಗೀತಾ ಬಿರಾದಾರ ಎಸ್.ಎಸ್.ಎಲ್.ಸಿಯಲ್ಲಿ ಶೇ.96ರಷ್ಟು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಸಮಾಜದ ಬಾಂಧವರು ಶೈಕ್ಷಣಿಕ ವೆಚ್ಚಕ್ಕೆಂದು 16 ಸಾವಿರ ರೂ. ಆರ್ಥಿಕ ನೆರವು ನೀಡಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು