Adapt the biography of Hande Hanumappa Nayaka into the text

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಕೂಡಲಸಂಗಮದಲ್ಲಿ ಜರುಗಿದ ರಾಜ್ಯಮಟ್ಟದ ಸಮಾವೇಶದ ಯಶಸ್ವಿಗೆ ಶ್ರಮಿಸಿದವರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ ಮಾತನಾಡಿ, ಕೂಡಲಸಂಗಮದಲ್ಲಿ ಫೆ.2 ರಂದು ನಡೆದ ಸಮಾಜದ ರಾಜ್ಯಮಟ್ಟದ ಸಮಾವೇಶ ಯಶಸ್ವಿಗೆ ತಾಲ್ಲೂಕಿನಿಂದ ಸಮಾಜದ ಬಾಂಧವರು 12 ಲಕ್ಷ ರೂ.ಗಳವರೆಗೆ ಉದಾರವಾದ ದೇಣಿಗೆ ನೀಡಿ ಸಹಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ. ಎಂ. ಬೆಳಗಲ್ ಮಾತನಾಡಿ, ಸಮಾಜದಲ್ಲಿರುವ ಬಡ ಮಕ್ಕಳ ಶಿಕ್ಷಣದ ವೆಚ್ಚಕ್ಕಾಗಿ ಸಮಾಜದ ಬಾಂಧವರು ಉಳಿತಾಯ ಮಾಡಿ ಅದನ್ನು ಅರ್ಹರಿಗೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು ಎಂದರು.

ಸಮಾಜದ ರಾಜ್ಯ ಉಪಾಧ್ಯಕ್ಷ ರಾಜಶೇಖರ ಮೇಗೇರಿ, ಸಮಾಜದ ತಾಲ್ಲೂಕು ಅಧ್ಯಕ್ಷ, ವಕೀಲರಾದ ಎಂ. ಬಿ. ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷ ಸಂಗಮೇಶ ಕರಭಂಟನಾಳ, ಎಸ್. ಎಸ್. ಭೂತಲ್ ಮಾತನಾಡಿದರು.

ಯುವ ಘಟಕದ ರಾಜ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭು ಬೆಳ್ಳಿ, ಗೌರವಾಧ್ಯಕ್ಷ ಕೆ. ಎನ್. ಗೌಡರ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ತಂಗಡಗಿ, ಮುಖಂಡರಾದ ಬಿ. ಎಲ್. ಬಿರಾದಾರ, ಹಣಮಗೌಡ ಪಾಟೀಲ, ಮಂಜುನಾಥ ಪಾಟೀಲ, ಎಸ್. ಬಿ. ಹಂಡರಗಲ್, ಹೇಮಾ ಬಿರಾದಾರ, ಸಂಗಮೇಶ ಶಿವಣಗಿ ಇದ್ದರು.

ಕಾರ್ಯಕ್ರಮದಲ್ಲಿ ಆಲಕೊಪ್ಪರದ ವಿದ್ಯಾರ್ಥಿನಿ ಗೀತಾ ಬಿರಾದಾರ ಎಸ್.ಎಸ್.ಎಲ್.ಸಿಯಲ್ಲಿ ಶೇ.96ರಷ್ಟು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಸಮಾಜದ ಬಾಂಧವರು ಶೈಕ್ಷಣಿಕ ವೆಚ್ಚಕ್ಕೆಂದು 16 ಸಾವಿರ ರೂ. ಆರ್ಥಿಕ ನೆರವು ನೀಡಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ