Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97