Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ