Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ