Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು