Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು