Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ