Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ