Aim high and achieve

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಮುದ್ದೇಬಿಹಾಳ : ಭೋವಿ ವಡ್ಡರ ಸಮಾಜದಲ್ಲಿ ಸಾಂಪ್ರದಾಯಿಕ ಕುಲಕಸುಬು ಪ್ರಧಾನವಾಗಿದ್ದರೂ ಸಮಾಜದ ಬಾಂಧವರ ಮಕ್ಕಳು ಶೈಕ್ಷಣಿಕವಾಗಿಯೂ ಉನ್ನತ ಗುರಿ ಇಟ್ಟುಕೊಂಡು ಸಾಧನೆ ತೋರಬೇಕು ಎಂದು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ ತಾಲೂಕಾ ಘಟಕದ ಉಪಾಧ್ಯಕ್ಷ ಹಣಮಂತ ಯ.ಭೈರವಾಡಗಿ ಹೇಳಿದರು.

ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಢವಳಗಿ ಗ್ರಾಮದ ವಡ್ಡರ ಸಮಾಜ ಹಾಗೂ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುದ್ದೇಬಿಹಾಳ ತಾಲೂಕಾ ಘಟಕದ ವತಿಯಿಂದ ಈಚೇಗೆ ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ 2025 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದ ಬಾಂಧವರು ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.ಶಿಕ್ಷಣದಿಂದ ಸಾಮಾಜಿಕವಾಗಿ ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.

ಭೋವಿ ವಡ್ಡರ ಸಮಾಜದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಪಾಸಾದ ವಿದ್ಯಾರ್ಥಿಗಳಾದ ಅಭಿಷೇಕ ಲೋ. ಮುರಾಳ, ಸ್ವಪ್ನಾ ರಾ. ಭೈರವಾಡಗಿ, ಹಣಮಂತಿ ನಾ. ವಡ್ಡರ, ಅಭಿಷೇಕ ಲ. ನಡವಿನಮನಿ, ವೆಂಕಟೇಶ ಗ. ಗೌಂಡಿ, ಸಂಜನಾ ಪ್ರ. ಗೌಂಡಿ, ಲಕ್ಷ್ಮಿ ಮ. ವಡ್ಡರ , ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ನಾಗಮ್ಮ ಭೀ ಗುಜ್ಜಲ, ಅಕ್ಷತಾ ವಿ ಬಂಡಿವಡ್ಡರ ಅವರನ್ನು ಸನ್ಮಾನಿಸಲಾಯಿತು.

ಗ್ರಾಪಂ ಮಾಜಿ ಸದಸ್ಯ ರವಿ ಢವಳಗಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪ್ರಕಾಶ ಭೈರವಾಡಗಿ, ನಾಗಪ್ಪ ಢವಳಗಿ, ರಾಜು ಭೈರವಾಡಗಿ, ಕಾಶಪ್ಪ ಭೈರವಾಡಗಿ, ಹಣಮಂತ ಮುತ್ತಗಿ, ರಾಜು ಢವಳಗಿ, ಗಿರೀಶ್ ಭೈರವಾಡಗಿ, ನಾಗರಾಜ ಭೈರವಾಡಗಿ,ರಾಮು ವಡ್ಡರ ಲಕ್ಷ್ಮಣ ಭೈರವಾಡಗಿ,ರಾಜ್ಯ ಕಾರ್ಯದರ್ಶಿ ಹಣಮಂತ ಭೀ ಬೆಳಗಲ್ಲ, ಪ್ರಶಾಂತ ಭೈರವಾಡಗಿ, ಹಣಮಂತ ಢವಳಗಿ, ಬಾಬು ಭೋವಿ, ಬಸವರಾಜ ಆಲಕುಂಟಿ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ