ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು.

ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಹಮ್ಮಿಕೊಂಡು ಬಂದಿರುವAತಹ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊAಡು ಇಡೀ ರಾಜ್ಯ ವ್ಯಾಪ್ತಿ ಅನುಷ್ಠಾನಗೊಂಡು ಇಂತಹ ಶಿಬಿರ ಸೇರಿ ಸುಮಾರು ರೂ. 1,40,000 ಜನ ಮದ್ಯ ವ್ಯಸನಿಗಳು ಸಾರಾಯಿ ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದರು.

ಹೊಸ ಜೀವನ ಪ್ರಾರಂಭ ಮಾಡಿ ನೀವು ಹಿಂದೆ ಸಮಾಜದಲ್ಲಿ ಸರಿಯಾದ ಗೌರವ ಸಿಗುತ್ತಿರಲಿಲ್ಲ. ಇವತ್ತು ನೀವು ಬದಲಾವಣೆ ಆಗಿ ಒಳ್ಳೆ ಜೀವನ ಕಟ್ಟಿಕೊಂಡರೆ ಮತ್ತೆ ನಿಮ್ಮನ್ನು ಸಮಾಜ ಒಬ್ಬ ಗಣ್ಯ ವ್ಯಕ್ತಿ ತರಾ ನೋಡತಾರೆ ಗೌರವ ಕೊಡುತ್ತಾರೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಮಾತನಾಡಿ, ಎಂಟು ದಿನ ಶಿಬಿರಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಿದ್ದು ಅದರ ಸದುಪಯೋಗಪಡೆದುಕೊಳ್ಳುವ ಬಗ್ಗೆ ತಿಳಿಸಿ ಎಂಟು ದಿನದ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲ ದಾನಿಗಳನ್ನು ಗಣ್ಯರನ್ನು ಒಕ್ಕೂಟದವರನ್ನು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರನ್ನು ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟ ಶಾದಿ ಮಹಲ್ ಕಮಿಟಿಯವರನ್ನು ಸಹಕಾರ ನೀಡಿದ ಎಲ್ಲರನ್ನು ಗೌರವದಿಂದ ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ಸೋಮನಗೌಡ (ಅಪ್ಪುಗೌಡ)ಪಾಟೀಲ್ ,ಚನ್ನಬಸಪ್ಪಗೌಡ ಪಾಟೀಲ್, ಬಸರಕೋಡ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪತ್ರಕರ್ತರಾದ ಶಂಕರ ಈ.ಹೆಬ್ಬಾಳ,ಹಣಮಂತ ನಲವಡೆ,ಗಣ್ಯರಾದ ಶ್ರೀಶೈಲ ಮೇಟಿ, ಶಂಕ್ರಪ್ಪ ಸಜ್ಜನ, ಗುಂಡಪ್ಪ ಕೊಟಗಿ,ಮಾಂತೇಶ ದಿಂಡವಾರ,
ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ಶ್ರೀಶೈಲ ದೊಡ್ಡಮನಿ,ವಿರೇಶ್ ಪಾಟೀಲ್, ಕಲ್ಬುರ್ಗಿ ಜನಜಾಗೃತಿ ಯೋಜನಾಧಿಕಾರಿ ರಾಜೇಶ, ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ, ಶಿಬಿರಾಧಿಕಾರಿ ದಿನೇಶ್ ಮರಾಠೆ,
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸ್ವಸಹಾಯ ಸಂಘದ ಸದಸ್ಯರು ವಲಯದ ಮೇಲ್ವಿಚಾರಕ ನಾಗೇಶ್ ಎಸ್ ಕೆ ,ನಿಂಗನಗೌಡ ಪಾಟೀಲ್, ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ,ಸೇವಾ ಪ್ರತಿನಿಧಿ ಇದ್ದರು.

Latest News

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ ಹೇಳಿದರು.ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಿಚ್ಚಿಟ್ಟರು. ನಮ್ಮ ಅವಧಿ ಆರಂಭವಾಗಿದ್ದೇ