ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು.

ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಹಮ್ಮಿಕೊಂಡು ಬಂದಿರುವAತಹ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊAಡು ಇಡೀ ರಾಜ್ಯ ವ್ಯಾಪ್ತಿ ಅನುಷ್ಠಾನಗೊಂಡು ಇಂತಹ ಶಿಬಿರ ಸೇರಿ ಸುಮಾರು ರೂ. 1,40,000 ಜನ ಮದ್ಯ ವ್ಯಸನಿಗಳು ಸಾರಾಯಿ ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದರು.

ಹೊಸ ಜೀವನ ಪ್ರಾರಂಭ ಮಾಡಿ ನೀವು ಹಿಂದೆ ಸಮಾಜದಲ್ಲಿ ಸರಿಯಾದ ಗೌರವ ಸಿಗುತ್ತಿರಲಿಲ್ಲ. ಇವತ್ತು ನೀವು ಬದಲಾವಣೆ ಆಗಿ ಒಳ್ಳೆ ಜೀವನ ಕಟ್ಟಿಕೊಂಡರೆ ಮತ್ತೆ ನಿಮ್ಮನ್ನು ಸಮಾಜ ಒಬ್ಬ ಗಣ್ಯ ವ್ಯಕ್ತಿ ತರಾ ನೋಡತಾರೆ ಗೌರವ ಕೊಡುತ್ತಾರೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಮಾತನಾಡಿ, ಎಂಟು ದಿನ ಶಿಬಿರಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಿದ್ದು ಅದರ ಸದುಪಯೋಗಪಡೆದುಕೊಳ್ಳುವ ಬಗ್ಗೆ ತಿಳಿಸಿ ಎಂಟು ದಿನದ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲ ದಾನಿಗಳನ್ನು ಗಣ್ಯರನ್ನು ಒಕ್ಕೂಟದವರನ್ನು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರನ್ನು ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟ ಶಾದಿ ಮಹಲ್ ಕಮಿಟಿಯವರನ್ನು ಸಹಕಾರ ನೀಡಿದ ಎಲ್ಲರನ್ನು ಗೌರವದಿಂದ ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ಸೋಮನಗೌಡ (ಅಪ್ಪುಗೌಡ)ಪಾಟೀಲ್ ,ಚನ್ನಬಸಪ್ಪಗೌಡ ಪಾಟೀಲ್, ಬಸರಕೋಡ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪತ್ರಕರ್ತರಾದ ಶಂಕರ ಈ.ಹೆಬ್ಬಾಳ,ಹಣಮಂತ ನಲವಡೆ,ಗಣ್ಯರಾದ ಶ್ರೀಶೈಲ ಮೇಟಿ, ಶಂಕ್ರಪ್ಪ ಸಜ್ಜನ, ಗುಂಡಪ್ಪ ಕೊಟಗಿ,ಮಾಂತೇಶ ದಿಂಡವಾರ,
ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ಶ್ರೀಶೈಲ ದೊಡ್ಡಮನಿ,ವಿರೇಶ್ ಪಾಟೀಲ್, ಕಲ್ಬುರ್ಗಿ ಜನಜಾಗೃತಿ ಯೋಜನಾಧಿಕಾರಿ ರಾಜೇಶ, ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ, ಶಿಬಿರಾಧಿಕಾರಿ ದಿನೇಶ್ ಮರಾಠೆ,
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸ್ವಸಹಾಯ ಸಂಘದ ಸದಸ್ಯರು ವಲಯದ ಮೇಲ್ವಿಚಾರಕ ನಾಗೇಶ್ ಎಸ್ ಕೆ ,ನಿಂಗನಗೌಡ ಪಾಟೀಲ್, ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ,ಸೇವಾ ಪ್ರತಿನಿಧಿ ಇದ್ದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.