ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು.

ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ವೀರೇಂದ್ರ ಹೆಗ್ಗಡೆ ಹಮ್ಮಿಕೊಂಡು ಬಂದಿರುವAತಹ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊAಡು ಇಡೀ ರಾಜ್ಯ ವ್ಯಾಪ್ತಿ ಅನುಷ್ಠಾನಗೊಂಡು ಇಂತಹ ಶಿಬಿರ ಸೇರಿ ಸುಮಾರು ರೂ. 1,40,000 ಜನ ಮದ್ಯ ವ್ಯಸನಿಗಳು ಸಾರಾಯಿ ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದರು.

ಹೊಸ ಜೀವನ ಪ್ರಾರಂಭ ಮಾಡಿ ನೀವು ಹಿಂದೆ ಸಮಾಜದಲ್ಲಿ ಸರಿಯಾದ ಗೌರವ ಸಿಗುತ್ತಿರಲಿಲ್ಲ. ಇವತ್ತು ನೀವು ಬದಲಾವಣೆ ಆಗಿ ಒಳ್ಳೆ ಜೀವನ ಕಟ್ಟಿಕೊಂಡರೆ ಮತ್ತೆ ನಿಮ್ಮನ್ನು ಸಮಾಜ ಒಬ್ಬ ಗಣ್ಯ ವ್ಯಕ್ತಿ ತರಾ ನೋಡತಾರೆ ಗೌರವ ಕೊಡುತ್ತಾರೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಮಾತನಾಡಿ, ಎಂಟು ದಿನ ಶಿಬಿರಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಿದ್ದು ಅದರ ಸದುಪಯೋಗಪಡೆದುಕೊಳ್ಳುವ ಬಗ್ಗೆ ತಿಳಿಸಿ ಎಂಟು ದಿನದ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲ ದಾನಿಗಳನ್ನು ಗಣ್ಯರನ್ನು ಒಕ್ಕೂಟದವರನ್ನು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರನ್ನು ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟ ಶಾದಿ ಮಹಲ್ ಕಮಿಟಿಯವರನ್ನು ಸಹಕಾರ ನೀಡಿದ ಎಲ್ಲರನ್ನು ಗೌರವದಿಂದ ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ಸೋಮನಗೌಡ (ಅಪ್ಪುಗೌಡ)ಪಾಟೀಲ್ ,ಚನ್ನಬಸಪ್ಪಗೌಡ ಪಾಟೀಲ್, ಬಸರಕೋಡ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪತ್ರಕರ್ತರಾದ ಶಂಕರ ಈ.ಹೆಬ್ಬಾಳ,ಹಣಮಂತ ನಲವಡೆ,ಗಣ್ಯರಾದ ಶ್ರೀಶೈಲ ಮೇಟಿ, ಶಂಕ್ರಪ್ಪ ಸಜ್ಜನ, ಗುಂಡಪ್ಪ ಕೊಟಗಿ,ಮಾಂತೇಶ ದಿಂಡವಾರ,
ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರಾದ ಶ್ರೀಶೈಲ ದೊಡ್ಡಮನಿ,ವಿರೇಶ್ ಪಾಟೀಲ್, ಕಲ್ಬುರ್ಗಿ ಜನಜಾಗೃತಿ ಯೋಜನಾಧಿಕಾರಿ ರಾಜೇಶ, ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ, ಶಿಬಿರಾಧಿಕಾರಿ ದಿನೇಶ್ ಮರಾಠೆ,
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸ್ವಸಹಾಯ ಸಂಘದ ಸದಸ್ಯರು ವಲಯದ ಮೇಲ್ವಿಚಾರಕ ನಾಗೇಶ್ ಎಸ್ ಕೆ ,ನಿಂಗನಗೌಡ ಪಾಟೀಲ್, ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ,ಸೇವಾ ಪ್ರತಿನಿಧಿ ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ