Allegation of fighter Shiv Shimpi: Illegal recruitment of teachers to Basava Bal Bharati Educational Institute

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

Ad
Ad

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ನೀಡಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ’ ಎಂದು ಹೋರಾಟಗಾರ, ವಕೀಲ ಚೇತನ ಶಿವಶಿಂಪಿ ದೂರಿದ್ದಾರೆ.

Ad
Ad

ತಾಲ್ಲೂಕಿನ ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯವರು ಮಾಡಿರುವ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಅವರು, ಈ ಬಗ್ಗೆ ಹಲವು ದೂರುಗಳನ್ನು ನೀಡಿದಾಗ ಮುದ್ದೇಬಿಹಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆಗೆ ತ್ರಿ ಸದಸ್ಯರ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರು 9 ಜನರ ತನಿಖಾ ತಂಡವನ್ನು ರಚಿಸಿದ್ದು, ಸದರಿ ತನಿಖಾ ತಂಡಗಳು ಈ ಶಾಲೆಯಲ್ಲಿ ಶಾಲಾ ಮಾನ್ಯತೆ ನವೀಕರಣ, ಪಿಟಿಆರ್, ಸಂದರ್ಶನ ವರದಿ ಸೇರಿದಂತೆ ಶಾಲೆ ಪ್ರಾರಂಭದಿಂದ ಅನುದಾನ ಪಡೆಯುವವರೆಗೆ ನಿರಂತರವಾಗಿ ನಡೆದಿರುವ ಬಗ್ಗೆ ಇಲಾಖಾ ನಿಯಮಗಳನ್ವಯ ಖಚಿತಪಡಿಸುವ ಹಲವು ದಾಖಲೆಗಳು ಇಲ್ಲದಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಶಾಲೆಯ ಮೇಲೆ ಕಾನೂನು ಕ್ರಮವಾಗಿ ಬೋಧಕ ಸಿಬ್ಬಂದಿಗಳು ಈವರೆಗೆ ಪಡೆದ ವೇತನವನ್ನು ಮರಳಿ ಸರ್ಕಾರಕ್ಕೆ ಭರಣಾ ಮಾಡುವ ಮತ್ತು ಬೋಧಕ ಸಿಬ್ಬಂದಿಗಳ ಸಹಿತ ಆಡಳಿತ ಮಂಡಳಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುವ ಹಂತದಲ್ಲಿದ್ದು, ಇಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುತ್ತಿರುವ ನನ್ನ ಮೇಲೆ ಸಂಸ್ಥೆಯವರು ರೂ.40 ಲಕ್ಷಕ್ಕೆ ಬೇಡಿಕೆ ಇಟ್ಟಿರುವದಾಗಿ ಮತ್ತು ನನ್ನ ತಾಯಿಯವರು ಇದೇ ಶಾಲೆಯಲ್ಲಿ ಸಹ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು ಈ ಬಗ್ಗೆ ನಕಲಿ ಪ್ರಮಾಣ ಸೃಷ್ಟಿಸಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ತನಿಖೆಯ ದಿಕ್ಕು ತಪ್ಪಿಸಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Latest News

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮುದ್ದೇಬಿಹಾಳ : ತಮ್ಮ ಪುತ್ರ ಕಿರಣ ಮದರಿ ಅವರ ಕಲ್ಯಾಣ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಚಾಟಿಸಿದ್ದನ್ನು ವಿರೋಧಿಸುವ ನೆಪದಲ್ಲಿ ಪ್ರತಿಭಟನಾ ರ‍್ಯಾಲಿ ನೆಪವಾಗಿಟ್ಟುಕೊಂಡು ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಅಪಮಾನಿಸುವುದನ್ನು ತಡೆಗಟ್ಟುವಂತೆ ಇಲ್ಲಿನ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಪೊಲೀಸ್ ಠಾಣೆಗೆ ಭಾನುವಾರ ಪತ್ರ ನೀಡಿದ್ದಾರೆ. ಈ ಕುರಿತು ಸಿಪಿಐಗೆ ಬರೆದಿರುವ ಪತ್ರದಲ್ಲಿ ಏ.7 ರಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ