Allegation of percentage for payment of wages: Notice issued to three employees asking the reason

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸಲು ಪರ್ಸೆಂಟೇಜ್‌ಗೆ ಬೇಡಿಕೆ ಇರಿಸಿರುವ ಆರೋಪದ ಮೇರೆಗೆ ಮೂವರು ನೌಕರರಿಗೆ ತಾಪಂ ಇಓ ಕಾರಣ ಕೇಳುವ ನೋಟಿಸ್ ಜಾರಿ ಮಾಡಿದ್ದಾರೆ.

ಏತನ್ಮಧ್ಯೆ ಶುಕ್ರವಾರವೂ ತಾಪಂ ಕಚೇರಿ ಮುಂದೆ ಧರಣಿ ನಡೆಸಿದ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಅವರನ್ನು ಭೇಟಿಯಾದ ತಾಪಂ ಇಒ ನಿಂಗಪ್ಪ ಮಸಳಿ, ಸದರಿ ಕೂಲಿಕಾರರ ಹಣವನ್ನು ಮುಂದಿನ ಹಂತದ ಕೂಲಿ ಪಾವತಿ ಸಮಯದಲ್ಲಿ ಮಾಡುವಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕರಿಗೆ ಸೂಚಿಸಲಾಗಿದೆ. ಗ್ರಾಪಂ ಸದಸ್ಯರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದರು.

ಧರಣಿ ನಿರತ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಮಾತನಾಡಿ, ತಾಪಂ ಇಒ ಅವರು ಕೊಟ್ಟ ಭರವಸೆ ಮೇರೆಗೆ ಧರಣಿ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದು ಬಾಕಿ ಕೂಲಿ ಹಣ ಪಾವತಿಸದೇ ಇದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು. ಗ್ರಾಪಂ ಸದಸ್ಯನ ಹೋರಾಟಕ್ಕೆ ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ ಅವರು ಬೆಂಬಲಿಸಿದರು. ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಹಾಗೂ ಹುಲ್ಲೂರು ಗ್ರಾಪಂ ಪಿಡಿಒ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಸೇವೆಯಲ್ಲಿರುವ ತಾಂತ್ರಿಕ ಸಹಾಯಕರು, ಎನ್.ಆರ್.ಇ.ಜಿ ಸಿಬ್ಬಂದಿ ಜನಪ್ರತಿನಿಧಿಗಳು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವ್ಯವಹರಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಎನ್.ಆರ್.ಇ.ಜಿ ಕೂಲಿಕಾರರ ವೇತನ ಪಾವತಿಗೆ ಪರ್ಸೇಂಟೇಜ್‌ಗೆ ಬೇಡಿಕೆ ಇಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಅವರನ್ನು ತಾಪಂ ಇಒ ನಿಂಗಪ್ಪ ಮಸಳಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಲಿಕಾರರ ಹಣ ಪಾವತಿ ಮಾಡಲು ಕೇಳಿದರೆ ಹೀಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದು ಮರುಕಳಿಸಿದರೆ ಮೇಲಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ