Allegation of percentage for payment of wages: Notice issued to three employees asking the reason

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸಲು ಪರ್ಸೆಂಟೇಜ್‌ಗೆ ಬೇಡಿಕೆ ಇರಿಸಿರುವ ಆರೋಪದ ಮೇರೆಗೆ ಮೂವರು ನೌಕರರಿಗೆ ತಾಪಂ ಇಓ ಕಾರಣ ಕೇಳುವ ನೋಟಿಸ್ ಜಾರಿ ಮಾಡಿದ್ದಾರೆ.

ಏತನ್ಮಧ್ಯೆ ಶುಕ್ರವಾರವೂ ತಾಪಂ ಕಚೇರಿ ಮುಂದೆ ಧರಣಿ ನಡೆಸಿದ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಅವರನ್ನು ಭೇಟಿಯಾದ ತಾಪಂ ಇಒ ನಿಂಗಪ್ಪ ಮಸಳಿ, ಸದರಿ ಕೂಲಿಕಾರರ ಹಣವನ್ನು ಮುಂದಿನ ಹಂತದ ಕೂಲಿ ಪಾವತಿ ಸಮಯದಲ್ಲಿ ಮಾಡುವಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕರಿಗೆ ಸೂಚಿಸಲಾಗಿದೆ. ಗ್ರಾಪಂ ಸದಸ್ಯರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದರು.

ಧರಣಿ ನಿರತ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಮಾತನಾಡಿ, ತಾಪಂ ಇಒ ಅವರು ಕೊಟ್ಟ ಭರವಸೆ ಮೇರೆಗೆ ಧರಣಿ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದು ಬಾಕಿ ಕೂಲಿ ಹಣ ಪಾವತಿಸದೇ ಇದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು. ಗ್ರಾಪಂ ಸದಸ್ಯನ ಹೋರಾಟಕ್ಕೆ ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ ಅವರು ಬೆಂಬಲಿಸಿದರು. ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಹಾಗೂ ಹುಲ್ಲೂರು ಗ್ರಾಪಂ ಪಿಡಿಒ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಸೇವೆಯಲ್ಲಿರುವ ತಾಂತ್ರಿಕ ಸಹಾಯಕರು, ಎನ್.ಆರ್.ಇ.ಜಿ ಸಿಬ್ಬಂದಿ ಜನಪ್ರತಿನಿಧಿಗಳು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವ್ಯವಹರಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಎನ್.ಆರ್.ಇ.ಜಿ ಕೂಲಿಕಾರರ ವೇತನ ಪಾವತಿಗೆ ಪರ್ಸೇಂಟೇಜ್‌ಗೆ ಬೇಡಿಕೆ ಇಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಅವರನ್ನು ತಾಪಂ ಇಒ ನಿಂಗಪ್ಪ ಮಸಳಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಲಿಕಾರರ ಹಣ ಪಾವತಿ ಮಾಡಲು ಕೇಳಿದರೆ ಹೀಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದು ಮರುಕಳಿಸಿದರೆ ಮೇಲಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು