ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆಯ ಸಂದರ್ಭದಲ್ಲಿ ಸರ್ಕಾರದ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ವಯ ಸರಿಯಾಗಿ ಪಾಲಿಸಿಲ್ಲ ಎಂಬ ಗಂಭೀರ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.ನಿಯಮಾನುಸಾರ ಎಸ್ಡಿಎಂಸಿ ಸಮೀತಿಯಲ್ಲಿ ಸದಸ್ಯರಾಗುವ ಪೋಷಕರ ಮಕ್ಕಳು ಸಂಬoಧಿಸಿದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದು ಸೇರಿದಂತೆ ಅಗತ್ಯ ಅರ್ಹತೆಗಳನ್ನ ಪರಿಗಣಿಸಬೇಕಾಗಿರುತ್ತದೆ.ಆದರೆ ಶಾಲೆಯೊಂದಿಗೆ ನೇರ ಸಂಬoಧವಿಲ್ಲದ ಕೆಲವು ವ್ಯಕ್ತಿಗಳು ತಪ್ಪು ಮಾಹಿತಿ ಹಾಗೂ ಪ್ರಭಾವವನ್ನು ಬಳಸಿ ಸಮೀತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹಾಗೂ ಸದಸ್ಯ ಸ್ಥಾನಗಳನ್ನು ಪಡೆದಿದ್ದಾರೆ ಎಂಬ ಆರೋಪಗಳು ಬಂದಿವೆ.ಈ ಕುರಿತು ಪ್ರಶ್ನಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೆಲವು ವ್ಯಕ್ತಿಗಳಿಂದ ಬೆದರಿಕೆ ಹಾಕುವುದು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುವ ಘಟನೆಗಳು ನಡೆದಿವೆ.’ನಾವು ಶಾಲೆಗೆ ಭೂದಾನ ನೀಡಿದ್ದೇವೆ.ನಮ್ಮನ್ನೇ ಅಧ್ಯಕ್ಷರನ್ನಾಗಿ ಮಾಡದಿದ್ದರೆ ಶಾಲೆಗೆ ಬೀಗ ಹಾಕುತ್ತೇವೆ’ ಎಂಬ ರೀತಿಯ ಬೆದರಿಕೆಯ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ಕೂಡಲೇ ಅಧಿಕಾರಿಗಳು ಪ್ರಸ್ತುತ ರಚನೆಯಾಗಿರುವ ಎಸ್.ಡಿ.ಎಂ.ಸಿ ಸಮೀತಿಯ ರಚನಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತನಿಖೆ ನಡೆಸಬೇಕು.ಸಮಿತಿಯಲ್ಲಿರುವ ಪ್ರತಿ ಸದಸ್ಯರ ಅರ್ಹತೆ ಅವರ ಮಕ್ಕಳು ಸದರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕುರಿತು ಪರಿಶೀಲನೆ ನಡೆಸಬೇಕು.ನಿಯಮಾವಳಿಗಳನ್ನು ಉಲ್ಲಂಘಿಸಿದ್ದು ಕಂಡು ಬಂದರೆ ಪ್ರಸ್ತುತ ಎಸ್ಡಿಎಂಸಿ ಸಮಿತಿ ವಿಸರ್ಜನೆ ಮಾಡಿ ಹೊಸದಾಗಿ ಸಮೀತಿಯನ್ನು ರಚಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಮಯದಲ್ಲಿ ಮಂಜುನಾಥ ಹೆಬ್ಬಾಳ,ವಿಜಯ ಲಿಂಗದಳ್ಳಿ,ಬಸವರಾಜ ಕಾಟಿ,ಅನೀಲ ಪಲ್ಲೇದ,ಬಸ್ಸು ಚವನಬಾವಿ,ಸಚಿನ ಚಿನ್ನಾಪೂರ,ಮಹೇಶ ಹುಗ್ಗಿ,ಶಿವು ಕುರಿ,ಪ್ರವೀಣ ಪಲ್ಲೇದ,ರಾಮು ಗಂಜಿಹಾಳ,ಶಾಹೀಲ್ ತಾಳಿಕೋಟಿ, ಎಂ.ಬಿ.ಸರೂರ, ಎಸ್.ಸಿ.ತಳವಾರ,ಶಿವಪ್ಪ ನಾಯ್ಕೋಡಿ ಮೊದಲಾದವರು ಇದ್ದರು.

ನಮ್ಮ ಪೂರ್ವಜರು ಶಾಲೆಗೆ ಭೂದಾನ ನೀಡಿದ್ದಾರೆ.ಗ್ರಾಮಸ್ಥರ ಹಾಗೂ ಪಾಲಕರ ಅಭಿಪ್ರಾಯ ಪಡೆದುಕೊಂಡೇ ನನ್ನನ್ನು ಅಧ್ಯಕ್ಷನೆಂದು ಘೋಷಿಸಲಾಗಿದೆ.ಆದರೆ ಈಗ ಮನವಿ ಕೊಟ್ಟವರಲ್ಲಿ ಬಹುತೇಕರಿಗೆ ಮದುವೆಯೇ ಆಗಿಲ್ಲ.ನನ್ನ ಮೊಮ್ಮಗ ಸರ್ಕಾರಿ ಶಾಲೆಯಲ್ಲಿಯೇ ಓದುತ್ತಿದ್ದಾನೆ.ನಾನು ಪೋಷಕನಾಗಿದ್ದು ನಿಯಮಾನುಸಾರವೇ ಆಯ್ಕೆ ನಡೆದಿದೆ. —-ಎಂ.ಬಿ.ಬಿರಾದಾರ,ಎಸ್ಡಿಎoಸಿ ಅಧ್ಯಕ್ಷ,ಕುಂಟೋಜಿ

ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪಾಲಕರು ಎಸ್.ಡಿ.ಎಂಸಿಗೆ ಪದಾಧಿಕಾರಿಗಳಾಗಲು ನಿಯಮ ರೂಪಿಸಲಾಗಿದೆ.ಈ ಬಗ್ಗೆ ಗ್ರಾಮಸ್ಥರಿಂದ ಸಲ್ಲಿಕೆಯಾದ ದೂರು ಅರ್ಜಿಯನ್ನು ಗಮನಿಸಲಾಗುವುದು.ಶಾಲೆಗೆ ಭೇಟಿ ನೀಡಿ ಸಮೀತಿ ರಚನೆಯಲ್ಲಿ ಯಾವ ನಿಯಮಗಳನ್ನು ಅನುಸರಿಸಲಾಗಿದೆ ಪರಿಶೀಲನೆ ಮಾಡುತ್ತೇನೆ.ಶಿಕ್ಷಣ ಪ್ರೇಮಿಗಳನ್ನು,ಹಿತೈಷಿಗಳನ್ನು ಶಾಲೆಯ ಗೌರವಧ್ಯಾಕ್ಷರನ್ನಾಗಿ ಆಯ್ಕೆ ಮಾಡಬಹುದಾಗಿದೆ.
—ಆರ್.ಬಿ.ಧಮ್ಮೂರಮಠ, ಬಿ.ಆರ್.ಸಿ

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ