ದಾವಣಗೆರೆ : ಇಲ್ಲಿಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ಆಯ್ಕೆಯಾಗಿದ್ದಾರೆ.ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಆನಂದ ಜಿರ್ಲಿ ಅವರು ರಿಯಲ್ ಎಸ್ಟೇಟ್ ಉದ್ಯಮದಲ್ಲು ಸಕ್ರಿಯರಾಗಿದ್ದಾರೆ.
ಈಚೇಗೆ ದಾವಣಗೆರೆ ರೆಡ್ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದು ಅದರಲ್ಲಿ ಸಭಾಪತಿಯಾಗಿ ಆರ್.ಜೆ.ದತ್ತರಾಜು,ಉಪ ಸಭಾಪತಿಯಾಗಿ ಶಿವಕುಮಾರ ಬೆಳ್ಳೂಡಿ,ಜಿಲ್ಲಾ ಕಾರ್ಯದರ್ಶಿಯಾಗಿ ಆನಂದ ಜಿರ್ಲಿ,ಖಜಾಂಚಿಯಾಗಿ ಕಿರಣ ಜೈನ್ ಆಯ್ಕೆಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಬಳಿ ಇದ್ದ ರೆಡ್ಕ್ರಾಸ್ ಸಂಸ್ಥೆಯ ಅಧಿಕಾರವನ್ನು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಹೈಕೋರ್ಟ್ಗೆ ಹೋಗಿ ಅಧಿಕಾರವನ್ನು ಪಡೆದುಕೊಂಡಿದ್ದಾರೆ.ಉಚ್ಛನ್ಯಾಯಾಲಯದ ಆದೇಶದಂತೆ ದಾವಣಗೆರೆ ಜಿಲ್ಲೆಯ ರೆಡ್ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಧಿಕಾರ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.







