ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Join Our Telegram: https://t.me/dcgkannada

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇವೆ.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಇದರ ನಡುವೆ, ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದಾಗ ಮೊಟ್ಟೆ ಕಸಿದು (Egg stolen) ಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್ ಮಾಡಲು ಸೂಚಿಸಿದ್ದೇನೆ.

ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Latest News

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ