ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Join Our Telegram: https://t.me/dcgkannada

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇವೆ.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಇದರ ನಡುವೆ, ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದಾಗ ಮೊಟ್ಟೆ ಕಸಿದು (Egg stolen) ಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್ ಮಾಡಲು ಸೂಚಿಸಿದ್ದೇನೆ.

ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Latest News

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು ನಡೆಯಲಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.18 ರಂದು ಬೆಳಗ್ಗೆ 5ಗಂಟೆಗೆ ಪಲ್ಲಕ್ಕಿ ಗಂಗಸ್ಥಳಕ್ಕೆ ಹೋಗಿ ಬರುವುದು.8ಕ್ಕೆ ಬೀರಲಿಂಗೇಶ್ವರ ಡೊಳ್ಳಿನ ಕುಣಿತದೊಂದಿಗೆ ಹಾಗೂ ತೆಲಗಿ ಕರಡಿ ಮಜಲಿನೊಂದಿಗೆ ದೇವಿಯ ಪಲ್ಲಕ್ಕಿಯನ್ನು ಬರಮಾಡಿಕೊಳ್ಳಲಾಗುವುದು.ನಂತರ ದೇವಿಗೆ ಮಹಾಭಿಷೇಕ ಜರುಗಲಿದೆ. ಸಾಯಂಕಾಲ 4ಕ್ಕೆ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಾಲ್ಕು ಹಲ್ಲಿನ,ಆರು ಹಲ್ಲಿನ ಹಾಗೂ ಓಪನ್ ಟಗರಿನ ಕಾಳಗ ಸ್ಪರ್ಧೆ ನಡೆಯಲಿದೆ.ಅಂದೇ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ