ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Join Our Telegram: https://t.me/dcgkannada

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇವೆ.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಇದರ ನಡುವೆ, ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದಾಗ ಮೊಟ್ಟೆ ಕಸಿದು (Egg stolen) ಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್ ಮಾಡಲು ಸೂಚಿಸಿದ್ದೇನೆ.

ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ