ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಕೊಪ್ಪಳ: ಅಂಗನವಾಡಿ ಯೊಂದರಲ್ಲಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ (Egg stolen) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Join Our Telegram: https://t.me/dcgkannada

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇವೆ.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಇದರ ನಡುವೆ, ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್​ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದಾಗ ಮೊಟ್ಟೆ ಕಸಿದು (Egg stolen) ಕೊಂಡಿದ್ದಾರೆ. ವಿಡಿಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ.

ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್​ಮಿಸ್ ಮಾಡಲು ಸೂಚಿಸಿದ್ದೇನೆ.

ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ. ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ