ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು