ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ