ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ