ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಖಾಸಗಿ ಬೇಕರಿ ಸಭಾಭವನದಲ್ಲಿ ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ನವಜಾತ ಶಿಶುಗಳ ಆರೈಕೆ, ಉಚಿತ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಹೇಳುವ ಮಾತುಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ, ನಗರ ಪ್ರದೇಶದಲ್ಲಾಗಲೀ ಆಶಾ, ಅಂಗನವಾಡಿ ಕಾರ್ಯಕರ್ತರು ಹೇಳುವ ಸಲಹೆಗಳಿಗೆ ತಾಯಂದಿರು ಹೆಚ್ಚು ಮಹತ್ವ ನೀಡುತ್ತಾರೆ.ಅವರು ನವಜಾತ ಶಿಶುಗಳ ಆರೈಕೆಯ ಕುರಿತು ಅರಿತುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗು ಮೃತಪಟ್ಟರೆ ಅದನ್ನು ಕಳೆದುಕೊಂಡ ಹೆತ್ತವರ ದುಃಖ ಎಂಥವರಲ್ಲೂ ಸಂಕಟಪಡುವAತಾಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಕಳೆದ ಎರಡ್ಮೂರು ವರ್ಷಗಳ ಮುಂಚೆ ಮಕ್ಕಳಿಗೆ ಕಾಯಿಲೆ ಗಂಭೀರ ಸ್ವರೂಪದ್ದೆಂದು ಕಂಡು ಬಂದರೆ ತಾಳಿಕೋಟಿಗೋ, ಬಾಗಲಕೋಟೆಗೋ ಹೋಗುತ್ತಿದ್ದೇವು.ಆದರೆ ಚಿಕ್ಕಮಕ್ಕಳ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಪರಶುರಾಮ ವಡ್ಡರ ಅವರು ಬಡವರು, ಬಲ್ಲಿದವರೆನ್ನದೇ ಎಲ್ಲರಿಗೂ ಮೃದುಸ್ವಭಾವದಿಂದ ಸೇವೆ ನೀಡುತ್ತಿರುವುದು ನಮ್ಮ ತಾಲ್ಲೂಕಿನ ಹೆಮ್ಮೆಯಾಗಿದೆ ಎಂದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಿಸರ್ಗ, ಎಂ.ಜಿ.ಎA.ಕೆ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಉಪಾಧ್ಯಕ್ಷ ಶರಣಪ್ಪ ವಡ್ಡರ, ಮುಖಂಡ ಪುಂಡಲೀಕ ಮುರಾಳ ಮಾತನಾಡಿದರು. ಚೈತ್ರಾ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ, ಬಸವರಾಜ ಬಡಿಗೇರ, ಪತ್ರಕರ್ತ ಪರಶುರಾಮ ಕೊಣ್ಣೂರ, ಆಶಾ ಕಾರ್ಯಕರ್ತೆ ರೇಣುಕಾ ಚಲವಾದಿ ಮತ್ತಿತರರು ಇದ್ದರು. ಕುಮಾರ ವಡ್ಡರ,ಬಿ.ಆರ್.ಬೆಳ್ಳಿಕಟ್ಟಿ, ಶಂಕರ ದೊಡಮನಿ ಕಾರ್ಯಕ್ರಮ ನಿರ್ವಹಿಸಿದರು.ತಾಲ್ಲೂಕಿನ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ನವಜಾತ ಶಿಶುಗಳ ತರಬೇತಿಯನ್ನು ನೀಡಲಾಯಿತು.ಪತ್ರಕರ್ತರನ್ನು ಸನ್ಮಾನಿಸಲಾಯಿತು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು