ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಖಾಸಗಿ ಬೇಕರಿ ಸಭಾಭವನದಲ್ಲಿ ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಭಾನುವಾರ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ನವಜಾತ ಶಿಶುಗಳ ಆರೈಕೆ, ಉಚಿತ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಹೇಳುವ ಮಾತುಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ, ನಗರ ಪ್ರದೇಶದಲ್ಲಾಗಲೀ ಆಶಾ, ಅಂಗನವಾಡಿ ಕಾರ್ಯಕರ್ತರು ಹೇಳುವ ಸಲಹೆಗಳಿಗೆ ತಾಯಂದಿರು ಹೆಚ್ಚು ಮಹತ್ವ ನೀಡುತ್ತಾರೆ.ಅವರು ನವಜಾತ ಶಿಶುಗಳ ಆರೈಕೆಯ ಕುರಿತು ಅರಿತುಕೊಳ್ಳಬೇಕು. ಹುಟ್ಟಿದ ಕೂಡಲೇ ಮಗು ಮೃತಪಟ್ಟರೆ ಅದನ್ನು ಕಳೆದುಕೊಂಡ ಹೆತ್ತವರ ದುಃಖ ಎಂಥವರಲ್ಲೂ ಸಂಕಟಪಡುವAತಾಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಕಳೆದ ಎರಡ್ಮೂರು ವರ್ಷಗಳ ಮುಂಚೆ ಮಕ್ಕಳಿಗೆ ಕಾಯಿಲೆ ಗಂಭೀರ ಸ್ವರೂಪದ್ದೆಂದು ಕಂಡು ಬಂದರೆ ತಾಳಿಕೋಟಿಗೋ, ಬಾಗಲಕೋಟೆಗೋ ಹೋಗುತ್ತಿದ್ದೇವು.ಆದರೆ ಚಿಕ್ಕಮಕ್ಕಳ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಪರಶುರಾಮ ವಡ್ಡರ ಅವರು ಬಡವರು, ಬಲ್ಲಿದವರೆನ್ನದೇ ಎಲ್ಲರಿಗೂ ಮೃದುಸ್ವಭಾವದಿಂದ ಸೇವೆ ನೀಡುತ್ತಿರುವುದು ನಮ್ಮ ತಾಲ್ಲೂಕಿನ ಹೆಮ್ಮೆಯಾಗಿದೆ ಎಂದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಿಸರ್ಗ, ಎಂ.ಜಿ.ಎA.ಕೆ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಉಪಾಧ್ಯಕ್ಷ ಶರಣಪ್ಪ ವಡ್ಡರ, ಮುಖಂಡ ಪುಂಡಲೀಕ ಮುರಾಳ ಮಾತನಾಡಿದರು. ಚೈತ್ರಾ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ, ಬಸವರಾಜ ಬಡಿಗೇರ, ಪತ್ರಕರ್ತ ಪರಶುರಾಮ ಕೊಣ್ಣೂರ, ಆಶಾ ಕಾರ್ಯಕರ್ತೆ ರೇಣುಕಾ ಚಲವಾದಿ ಮತ್ತಿತರರು ಇದ್ದರು. ಕುಮಾರ ವಡ್ಡರ,ಬಿ.ಆರ್.ಬೆಳ್ಳಿಕಟ್ಟಿ, ಶಂಕರ ದೊಡಮನಿ ಕಾರ್ಯಕ್ರಮ ನಿರ್ವಹಿಸಿದರು.ತಾಲ್ಲೂಕಿನ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ನವಜಾತ ಶಿಶುಗಳ ತರಬೇತಿಯನ್ನು ನೀಡಲಾಯಿತು.ಪತ್ರಕರ್ತರನ್ನು ಸನ್ಮಾನಿಸಲಾಯಿತು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ