ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ


ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.11ರಂದು 2024 ರಂದು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ಬ.ಬಾಗೇವಾಡಿ ತಾಲ್ಲೂಕು ಕಾನ್ನಾಳದ ನಿವಾಸಿ, ಹಾಲಿ ವಸ್ತಿ ಮುದ್ದೇಬಿಹಾಳದ ಆಶ್ರಯ ಕಾಲನಿಯಲ್ಲಿರುವ ಉಮೇಶ ಹಡಪದ ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿಯಿಂದ ಹೋಂಡಾ ಕಂಪನಿ, ಹಿರೋ ಹೋಂಡಾ ಹಾಗೂ ಬಜಾಜ ಪ್ಲಾಟಿನಾ ಕಂಪನಿಯ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ಆತನಿಂದ 45 ಗ್ರಾಂ ವಿವಿಧ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿದ ಒಟ್ಟು ವಸ್ತುಗಳ ಮೌಲ್ಯ 5.24 ಲಕ್ಷ ರೂ.ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ಪಿ.ಎಸ್.ಠಾಣೇದ, ವಿ.ಎನ್.ಹಾಲಗಂಗಾಧರಮಠ, ರಮೇಶ ಮದರಿ ಶ್ರಮಿಸಿದ್ದು ಅವರಿಗೆ ಎಸ್ಪಿ ಅವರು ಪ್ರಶಂಸಾ ಪತ್ರ,ಬಹುಮಾನ ಘೋಷಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್