ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ


ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.11ರಂದು 2024 ರಂದು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ಬ.ಬಾಗೇವಾಡಿ ತಾಲ್ಲೂಕು ಕಾನ್ನಾಳದ ನಿವಾಸಿ, ಹಾಲಿ ವಸ್ತಿ ಮುದ್ದೇಬಿಹಾಳದ ಆಶ್ರಯ ಕಾಲನಿಯಲ್ಲಿರುವ ಉಮೇಶ ಹಡಪದ ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿಯಿಂದ ಹೋಂಡಾ ಕಂಪನಿ, ಹಿರೋ ಹೋಂಡಾ ಹಾಗೂ ಬಜಾಜ ಪ್ಲಾಟಿನಾ ಕಂಪನಿಯ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ಆತನಿಂದ 45 ಗ್ರಾಂ ವಿವಿಧ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿದ ಒಟ್ಟು ವಸ್ತುಗಳ ಮೌಲ್ಯ 5.24 ಲಕ್ಷ ರೂ.ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ಪಿ.ಎಸ್.ಠಾಣೇದ, ವಿ.ಎನ್.ಹಾಲಗಂಗಾಧರಮಠ, ರಮೇಶ ಮದರಿ ಶ್ರಮಿಸಿದ್ದು ಅವರಿಗೆ ಎಸ್ಪಿ ಅವರು ಪ್ರಶಂಸಾ ಪತ್ರ,ಬಹುಮಾನ ಘೋಷಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು ನಿಲ್ಲಿಸಬೇಕು.ಹಾಗೊಂದು ವೇಳೆ ಸಾಕ್ಷಿ ಏನಾದರೂ ಇದ್ದರೆ ನನ್ನ ತಲೆ ನಾನೇ ತಗೆದುಕೊಳ್ಳಲು ಸಿದ್ದನಿದ್ದೇನೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಆ ಅಯೋಗ್ಯನ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ.ಅಷ್ಟೇ ಅಲ್ಲದೇ ಕಾಂಗ್ರೆಸ್,

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ