ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ


ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.11ರಂದು 2024 ರಂದು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ಬ.ಬಾಗೇವಾಡಿ ತಾಲ್ಲೂಕು ಕಾನ್ನಾಳದ ನಿವಾಸಿ, ಹಾಲಿ ವಸ್ತಿ ಮುದ್ದೇಬಿಹಾಳದ ಆಶ್ರಯ ಕಾಲನಿಯಲ್ಲಿರುವ ಉಮೇಶ ಹಡಪದ ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿಯಿಂದ ಹೋಂಡಾ ಕಂಪನಿ, ಹಿರೋ ಹೋಂಡಾ ಹಾಗೂ ಬಜಾಜ ಪ್ಲಾಟಿನಾ ಕಂಪನಿಯ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ಆತನಿಂದ 45 ಗ್ರಾಂ ವಿವಿಧ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿದ ಒಟ್ಟು ವಸ್ತುಗಳ ಮೌಲ್ಯ 5.24 ಲಕ್ಷ ರೂ.ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ಪಿ.ಎಸ್.ಠಾಣೇದ, ವಿ.ಎನ್.ಹಾಲಗಂಗಾಧರಮಠ, ರಮೇಶ ಮದರಿ ಶ್ರಮಿಸಿದ್ದು ಅವರಿಗೆ ಎಸ್ಪಿ ಅವರು ಪ್ರಶಂಸಾ ಪತ್ರ,ಬಹುಮಾನ ಘೋಷಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ