Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು