Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ