Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು