ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು.

ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ ಮಾತ್ರ ನೀಡಿರುತ್ತಾನೆ. ಅಂತಹ ಕೆಲವರಲ್ಲಿ ಹಾಸ್ಯ ಕಲಾವಿದರಾದ ಗೋಪಾಲ ಹೂಗಾರ ಕೂಡ ಒಬ್ಬರಾಗಿದ್ದಾರೆ. ಅವರು ಹುಟ್ಟಿದ ಊರಿನ ಸರ್ಕಾರಿ ಶಾಲಾ ಮಕ್ಕಳಿಗೆ ತಮ್ಮ ಜನುಮದಿನದ ಸಂದರ್ಭದಲ್ಲಿ ಸಹಾಯ ಮಾಡಿರುವುದು ಅತ್ಯಂತ ಅರ್ಥಪೂರ್ಣವಾದ ಸಾಮಾಜಿಕ ಕಾರ್ಯ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ. ಎಂ. ಬೆಳಗಲ್ಲ ಮಾತನಾಡಿ, ದೊಡ್ಡ ದೊಡ್ಡ ಸಿರಿವಂತರು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿ ಅನವಶ್ಯಕವಾಗಿ ಹಣ ವ್ಯಯ ಮಾಡುವ ಬದಲು, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ಈ ರೀತಿಯಾಗಿ ಸಹಾಯ ಮಾಡಿದರೆ ಅವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಕಾರ್ಯಗಳಿಂದ ಮಕ್ಕಳಲ್ಲಿ ಶಾಲೆಯ ಬಗ್ಗೆ ಆಸಕ್ತಿ ಹೆಚ್ಚುವುದರ ಜೊತೆಗೆ ಹಾಜರಾತಿ ಮತ್ತು ಕಲಿಕೆಯಲ್ಲಿಯೂ ಉತ್ತಮ ಬೆಳವಣಿಗೆ ಕಂಡುಬರುತ್ತದೆ ಎಂದರು.

ಹಾಸ್ಯ ಕಲಾವಿದ ಗೋಪಾಲ ಇಂಚಗೇರಿ ಮಾತನಾಡಿ, ಪ್ರತಿವರ್ಷ ನಮ್ಮ ಜನುಮದಿನವನ್ನು ವೃದ್ಧಾಶ್ರಮ, ಅನಾಥಾಶ್ರಮ, ಎಚ್‌ಐವಿ ಪೀಡಿತ ಮಕ್ಕಳು, ಕುಷ್ಠರೋಗಿಗಳು, ಮಂಗಳಮುಖಿಯರು ಹಾಗೂ ಜೋಪಡಿಯಲ್ಲಿ ವಾಸಿಸುವ ಅಲೆಮಾರಿ ಜನಾಂಗದವರೊAದಿಗೆ ಆಚರಿಸುತ್ತಾ ಬಂದಿದ್ದೇವೆ. ಈ ಬಾರಿ ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುವ ಮೂಲಕ ಜನುಮದಿನ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಹಾಯ-ಸಹಕಾರ ನೀಡುತ್ತೇವೆ ಎಂದು ಹೇಳಿದರು.


ಎಸ್‌ಡಿಎಂಸಿ ಅಧ್ಯಕ್ಷೆ ಮಂಗಳಾ ಎಂ. ಗಡೇದ ,ಸಿಆರ್‌ಪಿ ಎ.ಸಿ.ಕಸಬೇಗೌಡರ,ಊರಿನ ಗಣ್ಯರಾದ ಚಂದ್ರಾಮಪ್ಪ ಡಮನಾಳ , ಬಸವರಾಜ ಡಮನಾಳ,ಶಾಂತಗೌಡ ಪಾಟೀಲ ,ಭೀಮರಾಯ ಹಳ್ಳೂರ ,ಶರಣು ಗಂಗಾವತಿ,ಧರಿಯಪ್ಪ ಜಂಬಗಿ ,ಗುರುರಾಜ ಬಿರಾದಾರ ,ಮಹಾದೇವಪ್ಪ ಗಡೇದ, ಶಿವಾನಂದ ಪಟೇದ,ಎಸ್. ನ್. ಹೂಗಾರ, ಸಿದ್ದು ಹೂಗಾರ,ಲಕ್ಷ್ಮೀ ಇಂಚಗೇರಿ, ಕಲಾವಿದರಾದ ಗೋಪಾಲ ಇಂಚಗೇರಿ, ಕೃಷ್ಣ ಬೀದರ,ಮಲ್ಲು ಮುದ್ದೇಬಿಹಾಳ, ಹನುಮಂತ ಮಹಾಲಿಂಗಪೂರ ಹಾಗೂ ಪಾಲಕರು ಕಲಾವಿದರು, ಮುಖ್ಯಶಿಕ್ಷಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹಲವರು ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ