Astrology Image of astrology

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತ ಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶ ಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆ ಯನ್ನು ಸದ್ಯಕ್ಕೆ ಬಿಡುವುದು ಉತ್ತಮ.(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಮೃಗಶಿರಾ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು. ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ