Astrology Image of astrology

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತ ಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶ ಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆ ಯನ್ನು ಸದ್ಯಕ್ಕೆ ಬಿಡುವುದು ಉತ್ತಮ.(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಮೃಗಶಿರಾ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ