Astrology Image of astrology

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತ ಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶ ಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆ ಯನ್ನು ಸದ್ಯಕ್ಕೆ ಬಿಡುವುದು ಉತ್ತಮ.(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಮೃಗಶಿರಾ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,